ರಾಜ್ಯದಲ್ಲಿ ವರ್ಗಾವಣೆ ದಂಧೆ ಆರಂಭವಾಗಿದೆ – ಹೆಚ್ ಡಿಕೆ ಆರೋಪ

ರಾಜ್ಯದಲ್ಲಿ ವರ್ಗಾವಣೆ ದಂಧೆ ಆರಂಭವಾಗಿದೆ ಎಂದು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಆರೋಪಿಸಿದ್ದಾರೆ. ಈ ಸಂಬಂಧ ಬೆಂಗಳೂರಿನ ಜೆಪಿ ಭವನದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ನಾಯಕರು ಈಗ ಪ್ರತಿ ಹುದ್ದೆಗೆ ರೇಟ್ ಫಿಕ್ಸ್ ಮಾಡಿದ್ದಾರೆ. ಹಿಂದಿನ ಮುಖ್ಯಮಂತ್ರಿಗಳ ಬಗ್ಗೆ ಇವರೇ ಪೇಸಿಎಂ ಎಂದು ಪ್ರಚಾರ ಮಾಡಿದ್ದರು. ಆದರೆ, ಅದಕ್ಕಿಂತ ಜಾಸ್ತಿ ಈ ಸರ್ಕಾರದಲ್ಲಿ ನಡೆಯುತ್ತಿದೆ. ಎಷ್ಟು ಪರ್ಸೆಂಟ್ ಸರ್ಕಾರ ಎಂದು ಕರೆಯಬೇಕು? ಎಂದು ಪ್ರಶ್ನಿಸಿದರು. ಪೇಸಿಎಂ ಪ್ರಚಾರ ನಡೆಸಿದ್ದ ಇವರ ಬಗ್ಗೆಯೂ ನಾವು ಹಾದಿಬೀದಿಯಲ್ಲಿ ಪ್ರಚಾರ ನಡೆಸಬೇಕಿದೆ. ಗೋಡೆಗಳ ಮೇಲೆ ಪೋಸ್ಟರ್ ಅಂಟಿಸಬೇಕಿದೆ. ಸ್ವತಃ ಅಧಿಕಾರಿಗಳಲ್ಲೇ ರೇಟ್ ಫಿಕ್ಸ್ ಆಗಿದೆ ಅಂತ ಮಾತಾಡ್ತಾ ಇದ್ದಾರೆ ಎಂದು ಅವರು ದೂರಿದರು. ಈಗ ಇವರು ಏನ್​ ಮಾಡ್ತಾ ಇದ್ದಾರೆ ಎನ್ನುವುದನ್ನು ಜನ ಗಮನಿಸುತ್ತಿದ್ದಾರೆ. ಸಾಬೀತು ಮಾಡಿ ಅಂದರೆ ಹೇಗೆ ಮಾಡೋದು? ಹಿಂದೆ 40% ಆರೋಪವನ್ನು ಸಾಬೀತು ಮಾಡಿದ್ದರಾ? ಎಂದು ಪ್ರಶ್ನಿಸಿದ ಕುಮಾರಸ್ವಾಮಿ, ಈಗ ಅವರದೇ ಸರ್ಕಾರ ಬಂದಿದೆ, ಪರ್ಸೆಂಟೇಜ್ ಆರೋಪವನ್ನು ಸಾಬೀತು ಮಾಡಲಿ ಎಂದು ಸವಾಲು ಹಾಕಿದರು.

Loading

Leave a Reply

Your email address will not be published. Required fields are marked *