ಇಂದು ರಾಜ್ಯದೆಲ್ಲೆಡೆ ವರಮಹಾಲಕ್ಷ್ಮಿ ಹಬ್ಬ ಸಂಭ್ರಮ

ಬೆಂಗಳೂರು: ಇಂದು ರಾಜ್ಯದೆಲ್ಲೆಡೆ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ ಮನೆ ಮಾಡಿದೆ. ಶ್ರಾವಣ‌ ಮಾಸದ ಎರಡನೇ ಶುಕ್ರವಾರ ಆಚಾರಿಸಲಾಗುತ್ತದೆ. ಹೀಗಾಗಿ ನಗರದ ಲಕ್ಷ್ಮಿ ದೇವಸ್ಥಾನಗಳಲ್ಲಿ ಇಂದು ವಿಶೇಷ ಪೂಜೆ ಸಲ್ಲಿಸಲಾಗುತ್ತದೆ. ಅದರಲ್ಲಂತೂ ಮಹಾಲಕ್ಷ್ಮಿ ಲೇಔಟ್​ನಲ್ಲಿರುವ ಲಕ್ಷ್ಮಿ ದೇವಸ್ಥಾನದಲ್ಲಿ ಇಂದು ಬೆಳ್ಳಗ್ಗೆ 5 ಗಂಟೆಯಿಂದಲೇ ಅಮ್ಮನವರಿಗೆ ಪಂಚಾಭಿಷೇಕ,

ಪುಷ್ಪಭಿಷೇಕ ನೇರೆವೇರುತ್ತಿದ್ದು ವಿಶೇಷ ಅಲಂಕಾರದ ನಂತರ ಬರುವ ಭಕ್ತದಿಗಳಿಗೆ ದರ್ಶನಕ್ಕೆ ಅವಕಾಶ ನೀಡಲಾಗಿದೆ. ಮತ್ತೊಂದೆಡೆ ನಗರದ ಬನಶಂಕರಿ, ಮಹಾಲಕ್ಷ್ಮಿ ಲೇಔಟ್​ನ ಲಕ್ಷ್ಮಿ ದೇವಸ್ಥಾನ, ಕೆಆರ್​ಮಾರ್ಕೆಟ್​ನ ಕೋಟೆ ವೆಂಕಟೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ನೆರವೇರಿಸಲಾಗಿದೆ. ಇನ್ನು ಮುನ್ನುರಾಯಿ ಇಲಾಖೆಗೆ ಒಳಪಡುವ ಎಲ್ಲಾ ದೇವಸ್ಥಾನಗಳಲ್ಲಿ ಮಹಿಳೆಯರಿಗೆ ಭಾಗಿನ ನೀಡುವ ವ್ಯವಸ್ಥೆ ಮಾಡಲಾಗಿದೆ.

Loading

Leave a Reply

Your email address will not be published. Required fields are marked *