ಕಾಲೇಜು ವಿದ್ಯಾರ್ಥಿನಿಯರ ವಿಡಿಯೋ ಪ್ರಕರಣ: ಬಿಜೆಪಿ ಕಾರ್ಯಕರ್ತರಿಂದ ಪರಮೇಶ್ವರ್ ಮನೆಗೆ ನುಗ್ಗಲು ಯತ್ನ

ಬೆಂಗಳೂರು: ಉಡುಪಿ ಕಾಲೇಜು ವಿದ್ಯಾರ್ಥಿನಿಯರ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು(ಜು.27) ಬಿಜೆಪಿ ಯುವ ಮೋರ್ಚಾ ಪ್ರತಿಭಟನೆ ನಡೆಸುತ್ತಿದ್ದು. ಇದೀಗ ಗೃಹ ಸಚಿವ ಪರಮೇಶ್ವರ್ ಮನೆಗೆ ನುಗ್ಗಲು ಯತ್ನಿಸಿದ್ದಾರೆ. ಈ ಹಿನ್ನಲೆ ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆಯಲಾಗಿದೆ. ಉಡುಪಿ ಕಾಲೇಜು ವಿದ್ಯಾರ್ಥಿನಿಯರ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು(ಜು.27) ಬಿಜೆಪಿ ಯುವ ಮೋರ್ಚಾ ಪ್ರತಿಭಟನೆ ನಡೆಸಲಿದ್ದಾರೆ. ಈ ವೇಳೆ ಗೃಹ ಸಚಿವ ಜಿ.ಪರಮೇಶ್ವರ ಮನೆಗೆ ಮುತ್ತಿಗೆ ಹಾಕುವ ನಿರ್ಧಾರ ಹಿನ್ನಲೆ ಸಚಿವರ ಮನೆ ಸುತ್ತಮುತ್ತ ಬಿಗಿ ಪೊಲೀಸ್ ಭದ್ರತೆ ಕೈಗೊಳ್ಳಲಾಗಿದೆ. ಅದರಂತೆ ಸದಾಶಿವನಗರ ನಿವಾಸದ ರಸ್ತೆಗೆ ಬ್ಯಾರಿಕೇಟ್ ಹಾಕಿರುವ ಪೊಲೀಸರು, ಒಂದು ಕೆಎಸ್ಆರ್ಪಿ ತುಕಡಿ ಕೂಡ ನಿಯೋಜನೆ ಮಾಡಲಾಗಿದೆ.

Loading

Leave a Reply

Your email address will not be published. Required fields are marked *