ಮಂಗಳೂರು : ರೈಲ್ವೇ ಪ್ರಯಾಣಿಕರೇ ಗಮನಿಸಿ..ರೈಲ್ವೇ ಕಾಮಗಾರಿ ನಡೆಯುವ ಹಿನ್ನೆಲೆ ಜೂ.4 ರವರೆಗೆ ವಿಜಯಪುರ-ಮಂಗಳೂರು ರೈಲು ಸಂಚಾರ ರದ್ದುಗೊಳಿಸಲಾಗಿದೆ ಎಂದು ರೈಲ್ವೇ ಇಲಾಖೆ ಪ್ರಕಟಣೆ ಹೊರಡಿಸಿದೆ.
ವಿಜಯಪುರ-ಮಂಗಳೂರು ನಡುವೆ ಸಂಚರಿಸುವ ರೈಲು ಸಂಚಾರವನ್ನು ರದ್ದುಗೊಳಿಸಲಾಗಿದ್ದು, ಪ್ರಯಾಣಿಕರು ಸಹಕರಿಸುವಂತೆ ರೈಲ್ವೇ ಇಲಾಖೆ ಪ್ರಕಟಣೆ ಹೊರಡಿಸಿದೆ.
ಗೋವಾದಲ್ಲಿ ಮರ್ಜೋಡ ಮತ್ತು ವಾಸ್ಕೋ ಡ ಗಾಮಾ ವಿಭಾಗದಲ್ಲಿ ಸರಕುಗಳ ಸಾಗಾಟದ ಮೇಲೂ ಪರಿಣಾಮ ಬೀರಲಿದ್ದು, ಕುಲೇಮ್ – ವಾಸ್ಕೋ ಡ ಗಾಮಾ ರೈಲು ಮೇ 22, 24, 26 ರಂದು ರದ್ದಾಗಲಿದೆ ಎಂದು ರೈಲ್ವೇ ಇಲಾಖೆ ಪ್ರಕಟಣೆ ಹೊರಡಿಸಿದೆ.