ಬಿಜೆಪಿ ರಾಜ್ಯಾಧ್ಯಕ್ಷರಾಗಿ ವಿಜಯೇಂದ್ರ ಆಯ್ಕೆ ಹಿನ್ನೆಲೆ: ಸಿಟಿ ರವಿ ಅಸಮಾಧಾನ

ಬೆಂಗಳೂರು:- ನೂತನ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಮಾಜಿ ಸಿಎಂ ಯಡಿಯೂರಪ್ಪರ ಪುತ್ರ ಬಿವೈ ವಿಜಯೇಂದ್ರ ಆಯ್ಕೆ ಹಿನ್ನೆಲೆ ಮಾಜಿ ಶಾಸಕ ಸಿಟಿ ರವಿ ಅವರು ಪರೋಕ್ಷವಾಗಿ ಅಸಮಾಧಾನ ಹೊರ ಹಾಕಿದ್ದಾರೆ. ಮಧ್ಯಪ್ರದೇಶದಿಂದ ಕೆಂಪೇಗೌಡ ಏರ್ಪೋಟ್ ನಲ್ಲಿ ಬಂದಿಳಿದ ಬಳಿಕ ಮಾತನಾಡಿದ ಅವರು, ಪಕ್ಷ ನೇಮಕ ಮಾಡಿದೆ ವೈಚಾರಿಕ ಭದ್ರತೆ ಜೊತೆಗೆ ಪಕ್ಷ ಕಟ್ಟುವ ಬೆಳೆಸುವ ಕೆಲಸ ಮಾಡಬೇಕಿದೆ. ಜೊತೆಗೆ 28 ಕ್ಕೆ 28 ಸ್ಥಾನ ಗೆಲ್ಲಿಸುವ ಹೊಣೆಗಾರಿಕೆ ಇದೆ ಯಶಸ್ವಿಯಾಗಲಿ. ಬದಲಾಗದೆ ಇರೋದು ಕಾರ್ಯಕರ್ತ ಅನ್ನೂದು ನಾನೊಬ್ಬ ಈಗ ಸಾಮಾನ್ಯ ಕಾರ್ಯಕರ್ತ ಎಂದರು.

ಇನ್ನೂ ನೂತನ ಅಧ್ಯಕ್ಷನ ಆಯ್ಕೆ ಬಗ್ಗೆ ಕಾಂಗ್ರೇಸ್ ಟ್ವಿಟ್ ವಿಚಾರವಾಗಿ ಮಾತನಾಡಿ, ಅಸಮಧಾನದ ಬಗ್ಗೆ ಈಗ ನಾನು ಏನು ಮಾತನಾಡಲ್ಲ ಈಗಾಗಲೆ ಬಹಳಷ್ಟು ಮಾತನಾಡಿದ್ದೇನೆ. 35 ವರ್ಷಗಳಿಂದ ರಾಜಕೀಯ ಕ್ಷೇತ್ರದಲ್ಲಿದ್ದೀನಿ. ಬೂತ್ ಅಧ್ಯಕ್ಷನಿಂದ ರಾಷ್ಟ್ರಿಯಾ ಪ್ರಧಾನ ಕಾರ್ಯದರ್ಶಿ ವರೆಗೂ ಜವಬ್ದಾರಿ ನಿರ್ವಹಿಸಿದ್ದೀನಿ. ಈಗಾಗಲೆ ಬಹಳ‌ ವಿಷಯ ಮಾತನಾಡಿ ಬಿಟ್ಟಿದ್ದೇನೆ. ಈಗ ಏನಾದ್ರು ಮಾತನಾಡಿದ್ರೆ ನಮ್ಮ ಮಾತೆ ನಮಗೆ ತಿರುಗುಬಾಣವಾಗುತ್ತೆ ಎಂದು ಅಸಮಧಾನ ಹೊರ ಹಾಕಿ ತಲೆ ಮೇಲೆ‌ ಕೈಯಿಟ್ಟುಕೊಂಡು ಸಿಟಿ ರವಿ ಹೊರಟಿದ್ದಾರೆ.

Loading

Leave a Reply

Your email address will not be published. Required fields are marked *