ಬೆಂಗಳೂರು: ಕಾವೇರಿ ನದಿ ನೀರು ವಿಚಾರಕ್ಕೆ ಸುಪ್ರೀಂಕೋರ್ಟ್ ಪ್ರತ್ಯೇಕ ಪೀಠ ರಚನೆ ವಿಚಾರವಾಗಿ ಬೆಂಗಳೂರಿನಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಕೋರ್ಟ್ ಹೇಳಿದಂತೆ ಪೂರ್ಣ ಪ್ರಮಾಣ ನೀರು ಹರಿಸಲು ಸಾಧ್ಯವಾಗಿಲ್ಲ. ಬಿಜೆಪಿ, ಜೆಡಿಎಸ್ ನಾಯಕರು ಸುಖಾಸುಮ್ಮನೆ ಆರೋಪ ಮಾಡುತ್ತಿದ್ದಾರೆ. ತಮಿಳುನಾಡು ಸರ್ಕಾರ ಕಾವೇರಿ ನೀರಿಗಾಗಿ ಸುಪ್ರೀಂಕೋರ್ಟ್ಗೆ ಅರ್ಜಿ ಸಲ್ಲಿಸಿದ್ದು, ಈಗ ಸಿಜೆಐ ನೇತೃತ್ವದಲ್ಲಿ ಪ್ರತ್ಯೇಕ ಪೀಠ ರಚನೆ ಮಾಡಿದೆ. ಹಿಂದೆ ಕುಮಾರಸ್ವಾಮಿ ಅವರು ಕರ್ನಾಟಕ-ತಮಿಳುನಾಡಿನ ಜನ ಅಣ್ಣತಮ್ಮಂದಿರಿದ್ದಂತೆ ಎಂದಿದ್ದರು. ಹೀಗಾಗಿ ಮಾಜಿ ಸಿಎಂ ಅವರ ಹೇಳಿಕೆಯನ್ನು ನಾವು ಫಾಲೋ ಮಾಡುತ್ತಿದ್ದೇವೆ. ನಮಗೆ ರಾಜ್ಯದ ಜನರ ಹಿತಾಸಕ್ತಿ ಮುಖ್ಯ ಎಂದರು