ನಾವು ನುಡಿದಂತೆ ನಡೆದಿದ್ದೇವೆ: ಸಚಿವ ಸಂತೋಷ ಲಾಡ್

ಧಾರವಾಡ: ಧಾರವಾಡದಲ್ಲಿ ಗೃಹಜ್ಯೋತಿ ಯೋಜನೆಗೆ ಚಾಲನೆ ನೀಡಿ ಮಾತನಾಡಿದ ಕಾರ್ಮಿಕ ಸಚಿವ ಸಂತೋಷ ಲಾಡ್, ನಾವು ನುಡಿದಂತೆ ನಡೆದಿದ್ದೇವೆ. ಇದಕ್ಕೆ ನಮ್ಮ ಐದು ಕಾರ್ಯಕ್ರಮಗಳೇ ಸಾಕ್ಷಿ. ಯುವನಿಧಿ, ಗೃಹಲಕ್ಷ್ಮೀ ಯೋಜನೆ ಆರಂಭ ಆಗಿದೆ. ಬಿಜೆಪಿ ನಮ್ಮ ಮೇಲೆ ಆರೋಪ ಮಾಡುತ್ತಾ ಬಂದಿದೆ. ರೂ. 60 ಸಾವಿರ ಕೋಟಿಯನ್ನು ನೇರವಾಗಿ ಬಡ ಜನರಿಗೆ ತಲುಪಿಸುತ್ತಿದ್ದೇವೆ. ನಾವು ಅಕ್ಕಿ ಕೊಡುತ್ತಿರುವುದಕ್ಕೆ ಮೋದಿ ಅಕ್ಕಿ ಅಂತಾ ಆರೋಪ ಮಾಡಿದ್ರು. ಆದರೆ ಅದು ಮೋದಿ ಅಕ್ಕಿಯಲ್ಲ. ಅದಕ್ಕೆ ಬೇಕಾದ ಆಹಾರ ಭದ್ರತೆ ಕಾಯಿದೆ ತಂದಿದ್ದು ಕಾಂಗ್ರೆಸ್. 2013ರಿಂದ 18ರವರೆಗೆ ಇದ್ದ ಕಾಂಗ್ರೆಸ್ ಸರ್ಕಾರ ರೈತರ ಸಾಲ ಮನ್ನಾ ಮಾಡಿದೆ. ಬಡ್ಡಿ ರಹಿತ ಸಾಲ ಆರಂಭಿಸಿದ್ದು ಸಿದ್ದರಾಮಯ್ಯ. ಈ ಸಲ ಐದು ಲಕ್ಷದವರೆಗೆ ಬಡ್ಡಿ ರಹಿತ ಸಾಲ ಕೊಡಲಿದ್ದೇವೆ ಎಂದರು.

Loading

Leave a Reply

Your email address will not be published. Required fields are marked *