ನಾವು ಹಿಂದು ರಾಷ್ಟ್ರ ಮಾಡಿಯೇ ತೀರುತ್ತೇವೆ: ಪ್ರಮೋದ್ ಮುತಾಲಿಕ್

ಹುಬ್ಬಳ್ಳಿನಾವು ಹಿಂದು ರಾಷ್ಟ್ರ ಮಾಡಿಯೇ ತೀರುತ್ತೇವೆ. ಸರ್ಕಾರ ಏನು ಮಾಡುತ್ತದೋ ನಾವು ನೋಡಿಯೇ ತೀರುತ್ತೇವೆ ಯಾವ ಕಾಂಗ್ರೆಸ್ ನ ತಾಕತ್ ಇಧ್ರೆ ತಡೀಲಿ ನೋಡೋಣ ಎಂದು ಶ್ರೀ ರಾಮ ಸೇನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಸುದ್ದಿಗಾರೊಂದಿಗೆ ಮಾತನಾಡಿ ಸಿದ್ದರಾಮಯ್ಯ ಅವರ ಪುತ್ರ ಯತೀಂದ್ರ ಸಿದ್ದರಾಮಯ್ಯ ಅವರ ಹೇಳಿಕೆಗೆ ಈ ರೀತಿ ತಿರುಗೇಟು ನೀಡಿದರು. ಸಿದ್ದರಾಮಯ್ಯ ಮಗ ಅಂತಾ ಯತಿಂದ್ರ ಅವರ ಹೆಸರು ಬಂದಿದೆ. ಅಪ್ಪನ ಲುಂಗಿ ಹಿಡಕೊಂಡು ಬಂದವರು ಇವರು ಎಂದು ಮೂದಲಿಸಿದರು.

ಶಾಸಕ ಪ್ರಸಾದ್ ಅಬ್ಬಯ್ಯ ಅವರನ್ನು ತರಾಟೆಗೆ ತೆೆಗೆದುಕೊಂಡ ಮುತಾಲಿಕ್, ಆತ ದುಡಿಯುವವನು. ಬಿಡುಗಡೆ ಆಗುತ್ತೋ ಇಲ್ವಿಇಲ್ವೋ ಅಂತಾ ಕುಟುಂಬದವರು ಆತಂಕದಲ್ಲಿದ್ದಾರೆ. ಕಾಂಗ್ರೆಸ್ ಆತನನ್ನು ಅಮಾನವೀಯವಾಗಿ ಬಂಧನ ಮಾಡಿದ್ದನ್ನು ಶ್ರೀರಾಮ್ ಸೇನೆ ಖಂಡಿಸುತ್ತದೆ. ಸಿಎಂ, ಗೃಹ ಮಂತ್ರಿ ಸೇರಿ ಹಲವು ಸ್ಥಳೀಯ ನಾಯಕರು ದಾರಿ ತಪ್ಪಿಸ್ತಿದ್ದಾರೆ. ಅಬ್ಬಯ್ಯ ನೋ ಅಬ್ದುಲ್ಲಾ ನೋ ಗೊತ್ತಿಲ್ಲ. ಅವರು ದಾರಿ ತಪ್ಪಿಸುತ್ತಿದ್ದಾರೆ ಎಂದು ಆರೋಪಿಸಿದರು.

Loading

Leave a Reply

Your email address will not be published. Required fields are marked *