ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ವಿಚಾರ ‘ಯಾಕೆ ಕೊಡಲ್ಲ ನನಗೆ, ಕೊಡಲೇಬೇಕು ಎಂದು ಮಾಜಿ ಸಚಿವ ವಿ.ಸೋಮಣ್ಣ ಹೇಳಿದರು. ಬೆಂಗಳೂರಿನಲ್ಲಿ ಮಾತನಾಡಿದ ಅವರು ‘ರಾಜ್ಯದ ಯಾವ ನಾಯಕರ ಜೊತೆಗೂ ನಾನು ಮಾತನಾಡಿಲ್ಲ. ಇವರ ಕೈಯಲ್ಲಿ ಆಗದ ಕೆಲಸ ನಾನು ಮಾಡಿದ್ದೇನೆ. ಪ್ರಾಣದ ಹಂಗು ತೊರೆದು ನಾನು ಪಕ್ಷಕ್ಕಾಗಿ ಕೆಲಸ ಮಾಡಿದ್ದೇನೆ. ನಾನು ಸೋತಿರಬಹುದು. ಆದರೆ, ಕೊಟ್ಟ ಟಾಸ್ಕ್ನಲ್ಲಿ ಸೋತಿಲ್ಲ ಎಂದಿದ್ದಾರೆ.