ಆನೇಕಲ್ ;- ಮಹಿಳೆಯನ್ನ ಅತ್ಯಾಚಾರ ಮಾಡಿ ಕೊಲೈಗೈದಿದ್ದ ಕಾಮುಕನ ಕಾಲಿಗೆ ಪೊಲೀಸರು ಗುಂಡೇಟು ಹೊಡೆದಿದ್ದಾರೆ. ಬನ್ನೇರುಘಟ್ಟ ಸಮೀಪದ ಹಕ್ಕಿಪಿಕ್ಕಿ ಕಾಲೋನಿಯಲ್ಲಿ ಪೊಲೀಸರಿಂದ ತಪ್ಪಿಸಿಕೊಳ್ಳಲು ಯತ್ನಿಸಿದ ಆರೋಪಿ ಕಾಲಿಗೆ ಪೈರಿಂಗ್ ಮಾಡಲಾಗಿದೆ. ಆರೋಪಿ ಸೋಮ ಅಲಿಯಾಸ್ ಸೋಮಶೇಖರನ ಕಾಲಿಗೆ ಗುಂಡೇಟು ಹಾರಿಸಲಾಗಿದೆ.
ಬ್ಯಾಟರಾಯನದೊಡ್ಡಿಯ ಆರೋಪಿ ಸೋಮನ ಕಾಲಿಗೆ ಗುಂಡೇಟು ಹಾರಿಸಲಾಗಿದೆ. ಬೆಳಗ್ಗೆ ಆರೋಪಿಯನ್ನ ಸ್ಪಾಟ್ ಮಹಜರಿಗೆ ಕರೆದೊಯ್ದಾಗ ಎಸ್ಕೇಪ್ ಆಗಲು ಯತ್ನಿಸಿದ್ದಾನೆ. ಪೋಲೀಸ್ ಸಿಬ್ಬಂದಿ ಮಾದಪ್ಪ ಮೇಲೆ ಡ್ರ್ಯಾಗರ್ ನಿಂದ ಹಲ್ಲೆ ನಡೆಸಿ ಎಸ್ಕೇಪ್ ಆಗಲು ಆರೋಪಿ ಮುಂದಾದ. ಈ ವೇಳೆ ಜಿಗಣಿ ಇನ್ಸ್ಪೆಕ್ಟರ್ ಮಂಜುನಾಥ್ ರಿಂದ ಆರೋಪಿ ಸೋಮನ ಎಡಗಾಲಿಗೆ ಫೈರಿಂಗ್ ನಡೆದಿದೆ.
ಗುಂಡೇಟು ತಿಂದ ಆರೋಪಿಯನ್ನ ನಾರಾಯಣ ಹೆಲ್ತ್ ಸಿಟಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಮನೆಯಿಂದ ಹೊರಹೋದ ಮಹಿಳೆಯನ್ನ ನಿರ್ಜನ ಪ್ರದೇಶದಲ್ಲಿ ಕಾಮುಕರು ಅತ್ಯಾಚಾರ ಎಸಗಿದ್ದರು.
ಬನ್ನೇರುಘಟ್ಟ ಸಮೀಪದ ಬ್ಯಾಟರಾಯನದೊಡ್ಡಿಯಲ್ಲಿ ಮುನಿರತ್ನ ಎಂಬ ಮಹಿಳೆ ಮೇಲೆ ಅತ್ಯಾಚಾರ ಎಸಗಿದರು.
ಅತ್ಯಾಚಾರ ಎಸಗಿ ಕೊಲೆ ಮಾಡಿ ಪರಾರಿಯಾಗಿದ್ದರು. ಮಹಿಳೆ ದೇಹದ ಮೇಲೆ ಗಾಯದ ಗುರುತುಗಳು ಪತ್ತೆಯಾಗಿತ್ತು. ಮಹಿಳೆ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿರುವುದು ಗೊತ್ತಾಗಿತ್ತು. ಪ್ರಕರಣ ಸಂಬಂಧ ನಾಲ್ಕು ತಂಡಗಳನ್ನು ರಚನೆ ಮಾಡಿದ್ದ ಪೊಲೀಸರು, ಹೆಚ್ಚಿನ ತನಿಖೆ ಕೈಗೊಂಡಿದ್ದರು.