ನಮ್ಮ ಒತ್ತಡಕ್ಕೆ ಮಣಿದು ಪ್ರಧಾನಿ ಸಿಲಿಂಡರ್ ಬೆಲೆ 200 ರೂ ಇಳಿಸಿದ್ದಾರೆ: ಡಿಕೆ ಶಿವಕುಮಾರ್

ಬೆಂಗಳೂರು: ನಮ್ಮ ದೇಶದ ಹೆಣ್ಣು ಮಕ್ಕಳು ಕರ್ನಾಟಕದ ಮಾದರಿ ನೋಡ್ತಿದ್ದಾರೆಂದು ಬೆಂಗಳೂರಿನಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಗೃಹ ಲಕ್ಷ್ಮಿ ಯೋಜನೆ ಚಾಲನೆ ಬಗ್ಗೆ ಸಂತಸ ವ್ಯಕ್ತಪಡಿಸಿದ್ದಾರೆ. ನಮ್ಮ ದೇಶದ ಹೆಣ್ಣು ಮಕ್ಕಳು ಕರ್ನಾಟಕದ ಮಾದರಿ ನೋಡ್ತಿದ್ದಾರೆ. ನಮ್ಮ ಒತ್ತಡಕ್ಕೆ ಮಣಿದು ಪ್ರಧಾನಿ ಸಿಲಿಂಡರ್ ಬೆಲೆ 200 ರೂ ಇಳಿಸಿದ್ದಾರೆ. 500ರೂಗೆ ಗ್ಯಾಸ್ ಸಿಲಿಂಡರ್ ಕೊಡಬೇಕು ಅಂತ ಹೇಳಿದ್ದೆವು.

ಈಗ ನಾವು 2 ಸಾವಿರ ಕೊಡ್ತಿದ್ದೀವಿ. ಹೆಣ್ಣು ಮಕ್ಕಳ ಅಕೌಂಟಿಗೆ ಹಣ ಹೋಗಲಿದೆ. ನೂರು ದಿನದ ಸಂಭ್ರಮ ಆಚರಿಸ್ತಿದ್ದೇವೆ. ನಾಡಿನ ಎಲ್ಲಾ ಹೆಣ್ಣು ಮಕ್ಕಳ ಮನೆಗೆ ಹಣ ತಲುಪುತ್ತಿದೆ. ಸಿದ್ದರಾಮಯ್ಯ, ನಾನು ಚೆಕ್ಗೆ ಸಹಿ ಹಾಕಿದ್ದೆವು. ರಾಹುಲ್ ಗಾಂಧಿ ಹಾಗೂ ಮಲ್ಲಿಕಾರ್ಜುನ ಖರ್ಗೆ ಬರ್ತಿದ್ದಾರೆ. ಅವರು ಕಾರ್ಯಕ್ರಮ ಉದ್ಘಾಟನೆ ಮಾಡಲಿದ್ದಾರೆ ಎಂದು ಡಿಕೆ ಶಿವಕುಮಾರ್ ಸಂತಸ ಹಂಚಿಕೊಂಡರು.

Loading

Leave a Reply

Your email address will not be published. Required fields are marked *